ಪ್ರತಿ ತಪ್ಪಿಗೂ ಶಿಕ್ಷೆಯ ಅಗತ್ಯವಿದೆ: ಸಚಿನ್ ಪೈಲಟ್

ರಾಜಸ್ಥಾನದಲ್ಲಿ ಸಚಿನ ಪೈಲಟ್ ಹಾಗೂ ಅಶೋಕ್ ಗೆಹ್ಲೋಟ್​ ನಡುವಿನ ಭಿನ್ನಾಭಿಪ್ರಾಯವು ರಾಜಕೀಯ ತಾಪಮಾನವನ್ನು ಹೆಚ್ಚಿಸುತ್ತಿದೆ. ಎಷ್ಟೇ ಪ್ರಯತ್ನ ಪಟ್ಟರೂ ಎರಡು ನಾಯಕರ ನಡುವೆ ಹೊಂದಾಣಿಕೆಯಾಗುತ್ತಿಲ್ಲ, ಪ್ರತಿ ತಪ್ಪಿಗೂ ಶಿಕ್ಷೆಯ ಅಗತ್ಯವಿದೆ ಎಂದು ಸಚಿನ್ ಪೈಲಟ್ ಅಶೋಕ್ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಚಿನ್ ಪೈಲಟ್ ಅವರು ದೌಸಾದಲ್ಲಿ  ಸಿಎಂ ಅಶೋಕ್ ಗೆಹ್ಲೋಟ್ ಅವರ ಹೆಸರನ್ನು ತೆಗೆದುಕೊಳ್ಳದೆ ತೀವ್ರವಾಗಿ ವಾಗ್ದಾಳಿ ನಡೆಸಿದರು. ಗಣಿ ಹಂಚಿಕೆ ಕುರಿತು ಆದ ತಪ್ಪಿನ ಬಗ್ಗೆ ಮಾತನಾಡಿದರು. ಜನರಿಗೆ ನ್ಯಾಯ ಒದಗಿಸುವ ಭರವಸೆ ನಿನ್ನೆಯೂ ಇತ್ತು, ಇಂದೂ ಇದೆ ಮತ್ತು ನಾಳೆಯೂ ಹಾಗೆಯೇ ಇರುತ್ತದೆ. ರಾಜಕೀಯದಲ್ಲಿ ಇದು ಬಹಳ ಮುಖ್ಯ.

ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಭಾನುವಾರ ದೌಸಾದಲ್ಲಿ ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯ ಸಂದರ್ಭದಲ್ಲಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಪ್ರತಿಮೆಯನ್ನು ಗುರ್ಜರ್ ಹಾಸ್ಟೆಲ್‌ನಲ್ಲಿ ಸ್ಥಾಪಿಸಲಾಗಿದೆ. ಈ ಸಂದರ್ಭದಲ್ಲಿ ಸಚಿನ್ ಪೈಲಟ್ ಭಾವುಕರಾದರು. 23 ವರ್ಷಗಳ ಹಿಂದೆ ಇದೇ ದಿನ ತಮ್ಮ ತಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದರು. ಆ ದೃಶ್ಯ ಈಗಲೂ ನೆನಪಿದೆ ಎಂದು ಹೇಳಿದರು. ತಂದೆಯಿಂದ ರಾಜಕೀಯ ಕಲಿತಿದ್ದೇನೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.