ಹಳಿಯಾಳ :ಹಳಿಯಾಳ ಪಟ್ಟಣದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆಯವರಿಂದ ಶಕ್ತಿ ಯೋಜನೆಗೆ ಚಾಲನೆ

ಹಳಿಯಾಳ : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಕಾರ್ಯಕ್ರಮದ ಉದ್ಘಾಟನೆಯನ್ನು ಹಳಿಯಾಳ ಪಟ್ಟಣದಲ್ಲಿರುವ ತಾಲ್ಲೂಕು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಭಾನುವಾರ ಮಧ್ಯಾಹ್ನ 1 ಗಂಟೆಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ.ದೇಶಪಾಂಡೆಯವರು ಮಹಿಳಾ ಸಬಲೀಕರಣದ ದಿಶೆಯಲ್ಲಿ ಹೊಸ ಮುನ್ನಡಿ ಎಂದೇ ಹೇಳಬಹುದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಐತಿಹಾಸಿಕವಾದ ಯೋಜನೆಯಾಗಿದೆ. ಉದ್ಯೋಗ, ಶಿಕ್ಷಣ ಕುಟುಂಬ ನಿರ್ವಹಣೆ ಮುಂತಾದ ಜವಾಬ್ದಾರಿಯನ್ನು ನಿರ್ವಹಿಸುವ ಕಾರಣಕ್ಕಾಗಿ ನಿತ್ಯ ಸಂಚರಿಸುವ ಕ್ಷೇತ್ರದ ಹಾಗೂ ನಾಡಿನ ಅಸಂಖ್ಯಾತ ಮಹಿಳೆಯರ ಬದುಕಿಗೆ ಈ ಯೋಜನೆ ಬಲ ತುಂಬಲಿದೆ. ಈ ನಿಟ್ಡಿನಲ್ಲಿ ಶಕ್ತಿ ಯೋಜನೆಯ ಪ್ರಯಾಣ ಸೌಲಭ್ಯವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್, ಸಾರಿಗೆ ಘಟಕದ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾಂಗ್ರೆಸ್ ಪಕ್ಷದ ಮಹಿಳಾ ಮುಖಂಡರು, ಮಹಿಳಾ ಕಾರ್ಯಕರ್ತೆಯರು, ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.