ಸಚಿವರ ಪುತ್ರನ ದರ್ಬಾರ್ – ತಂದೆಯ ಕ್ಷೇತ್ರದಲ್ಲಿ ಶಕ್ತಿ ಯೋಜನೆಗೆ ಚಾಲನೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಶಾಸಕ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ ಪುತ್ರ ತಮ್ಮ ತಂದೆಯ ಅನುಪಸ್ಥಿತಿಯಲ್ಲಿ ಸರ್ಕಾರದ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಪಿರಿಯಾಪಟ್ಟಣದಲ್ಲಿ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಸಚಿವರ ಪುತ್ರ ನಿತಿನ್ ವೆಂಕಟೇಶ್ ಅವರ ದರ್ಬಾರ್ ನಡೆದಿದೆ. ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂದೆ ಅನುಪಸ್ಥಿತಿಯಲ್ಲಿ ತಾನೇ ಮುಂದೆ ನಿಂತು ಶಕ್ತಿಯೋಜನೆಗೆ ಚಾಲನೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.