ಹಳಿಯಾಳ :ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ನೂತನ ನಿರ್ದೇಶಕರಾಗಿ ಪ್ರಶಾಂತ್ ಬಡ್ಡಿ ಅಧಿಕಾರ ಸ್ವೀಕಾರ

ಹಳಿಯಾಳ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ನೂತನ ನಿರ್ದೇಶಕರಾಗಿ ಕೆನರಾ ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿರುವ ಪ್ರಶಾಂತ್ ಬಡ್ಡಿಯವರು ಇಂದು ಅಧಿಕಾರವನ್ನು ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೇಯ ಸಂಸ್ಥಾಪಕ ನಿರ್ದೇಶಕರು ಹಾಗೂ ಹಾಲಿ ಸಲಹೆಗಾರರಾದ ಅನಂತಯ್ಯ ಆಚಾರ್, ಸಂಸ್ಥೆಯ ಯೋಜನಾ ಸಂಯೋಜಕ ವಿನಾಯಕ ಚೌವ್ಹಾಣ್, ಲೆಕ್ಕಾಧಿಕಾರಿ ಬಾಹುಬಲಿ ಜೈನ್, ಯೋಜನಾಧಿಕಾರಿ ಸಂತೋಷ್ ಪರೀಟ್ ಸೇರಿದಂತೆ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು, ಆತ್ಮೀಯವಾಗಿ ಬರಮಾಡಿಕೊಂಡರು.

ಮೂಲತ: ಬಾಗಲಕೋಟೆ ಜಿಲ್ಲೆಯವರಾದ ಪ್ರಶಾಂತ್ ಬಡ್ಡಿಯವರು ಕೆನರಾ ಬ್ಯಾಂಕಿನ ಮಣಿಪಾಲ ವೃತ್ತ ಕಚೇರಿಯಿಂದ ವರ್ಗಾವಣೆಯಾಗಿ ಬಂದಿರುತ್ತಾರೆ. ಸಿಂಡಿಕೇಟ್ ಬ್ಯಾಂಕಿನಲ್ಲಿ ಸೇವೆಗೆ ಸೇರ್ಪ್ಪಡೆಗೊಂಡು ಸರಿ ಸುಮಾರು 8 ವರ್ಷಗಳವರೆಗೆ ಸಿಂಡಿಕೇಟ್ ಗ್ರಾಮೀಣಾಭಿವೃದ್ಧಿ ಅಧಿಕಾರಿಯಾಗಿ ಪ್ರಶಾಂತ್ ಬಡ್ಡಿಯವರು ಅನುಪಮ ಸೇವೆ ಸಲ್ಲಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.