ಹಳಿಯಾಳ : ಶಿವಾಜಿ.ಪಿ.ಮಾದಪ್ಪಗೌಡನ ಸಾಧನೆಗೆ ಎಸ್.ಎಲ್ ಘೋಟ್ನೇಕರ್ ಹರ್ಷ

ಹಳಿಯಾಳ : ದಕ್ಷಿಣ ಕೋರಿಯಾದಲ್ಲಿ ನಡೆದ ಕಿರಿಯರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಹಳಿಯಾಳ ತಾಲ್ಲೂಕಿನ ಬೆಳವಟಗಿ ಗ್ರಾಮದ ಶಿವಾಜಿ.ಪಿ ಮಾದಪ್ಪಗೌಡ ಈತನೂ ಪುರುಷರ 5000 ಮೀ ಓಟದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕಕ್ಕೆ ಭಾಜನನಾಗಿರುವುದಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೇಕರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಅವರು ಇಂದು ಹಳಿಯಾಳ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡುತ್ತಾ ಹಳಿಯಾಳ ತಾಲ್ಲೂಕಿನ ಕೀರ್ತಿಯನ್ನು ಬೆಳಗಿಸಿ ಶಿವಾಜಿ ನಮ್ಮ ರಾಷ್ಟ್ರದ ಹೆಮ್ಮೆಯಾಗಿದ್ದಾನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವುದರ ಮೂಲಕ ತಾಲ್ಲೂಕಿನ ಕೀರ್ತಿಯನ್ನು ಮತ್ತಷ್ಟು ಬೆಳಗಿಸುವಂತಾಗಲೆಂದು ಶುಭ ಹಾರೈಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.