ಬೈಕ್‌ನಲ್ಲಿ ಜಾಲಿರೈಡ್‌ ಹೋದ ಸ್ನೇಹಿತರು ಪೀಸ್‌ ಪೀಸ್: ದೇಹದ ತುಂಡುಗಳನ್ನು ಎತ್ತಿಕೊಂಡು ಹೋದ ಪೊಲೀಸರು

ಬೆಳಗಾವಿ (ಜೂ.14): ಒಂದೇ ಬೈಕ್‌ನಲ್ಲಿ ತ್ರಿಬಲ್‌ ರೈಡಿಂಗ್‌ ಹೋಗುತ್ತಿದ್ದ ಯುವಕರು ಟೆಂಪೋಗೆ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ್ದಾರೆ. ಇನ್ನು ಯುವಕರ ದೇಹದ ಒಂದೊಂದು ಭಾಗಗಳೂ ಕೂಡ ತುಂಡಾಗಿ ದಿಕ್ಕಾಪಾಲಕಾಗಿ ಬಿದ್ದಿವೆ. ಯುವಕರ ದೇಹದ ಕೈಗಳು, ಕಾಲು ಹಾಗೂ ದೇಹದ ಇತರೆ ಭಾಗಗಳು ಪೀಸ್‌ಪೀಸ್‌ಗಳಾಗಿ ಬಿದ್ದಿದ್ದವು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸವನಾಳಗಡ್ಡೆ ಬಳಿ ರಾತ್ರಿ ಸಂಭವಿಸಿದೆ.  ಬೈಕ್ ಹಾಗೂ ಟೆಂಪೋ ಮಧ್ಯ ಭೀಕರ ರಸ್ತೆ ಅಪಘಾತ ಮೂವರು ಯುವಕರ ಸಾವಾಗಿದೆ. ಮೃತ ದುರ್ದೈವಿ ಯುವಕರನ್ನು ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಪ್ರಶಾಂತ ಬೈರು ಖೋತ(22), ಸತೀಶ ಕಲ್ಲಪ್ಪ ಹಿರೇಕೊಡಿ(23) ಹಾಗೂ ಬೆಳಗಾವಿಯ ನಿವಾಸಿ ಯಲಗೌಡ ಚಂದ್ರಕಾಂತ ಪಾಟೀಲ (22) ಎಂದು ಗುರ್ತಿಸಲಾಗಿದೆ. ರಾತ್ರಿ ವೇಳೆ ಬೈಕ್‌ನಲ್ಲಿ ಜಾಲಿರೈಡ್‌ ಹೊರಟಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.