ಮಹಿಳಾ ಪ್ರಯಾಣಿಕರ ಜೊತೆ ಅನಾಗರೀಕನಂತೆ ವರ್ತಿಸಿದ ಕೆಎಸ್ಆರ್‌ಟಿಸಿ ಚಾಲಕ!

ತುಮಕೂರು (ಜೂ.16) ಉಚಿತ ಪ್ರಯಾಣ ಎಂದು ಬಸ್ಸಿನಲ್ಲಿ ದೇವರ ದರ್ಶನಕ್ಕೆ ಬಂದ ಮಹಿಳೆಯರ ಮೇಲೆ ಚಾಲಕ ಅನಾಗರಿಕನಂತೆ ವರ್ತಿಸಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಊರಿಗೆ ಹೋಗಲು ಪುಟ್ಟ ಕಂದಮ್ಮ  ಎತ್ತಿಕೊಂಡು ನಿಂತದ್ದ ಮಹಿಳೆ ಕಂಡೂ ಕರಗದ ಚಾಲಕನ ಮನಸ್ಸು. ಮಹಿಳೆಯರ ಮೇಲೆಯೇ ಬಸ್ ಹರಿಸಲು ಮುಂದಾಗಿದ್ದ ಸರ್ಕಾರಿ ಬಸ್ ಚಾಲಕ. ಸಾರಿಗೆ ಬಸ್ ಚಾಲಕನ ಅನಾಗರೀಕ ವರ್ತನೆ ಮೊಬೈಲ್ ನಲ್ಲಿ ಸೆರೆ ಹಿಡಿದ ಸ್ಥಳೀಯರು.