ನಿರ್ಮಾಣ ಹಂತದ ಶಾಲೆ ಕಟ್ಟಡದ ಗೋಡೆ ಕುಸಿದು ಬಾಲಕ ಸಾವು

ಹುಬ್ಬಳ್ಳಿ (ಜೂ.17) ಶಾಲಾ ಆವರಣದಲ್ಲಿ ಕೊಠಡಿಯ ನಿರ್ಮಾಣ ಹಂತದ ಗೋಡೆ ಕುಸಿದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟು, ಮತ್ತೋರ್ವ ತೀವ್ರ ಗಾಯಗೊಂಡ ಘಟನೆ ತಾಲೂಕಿನ ಕಿರೇಸೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಕಳಪೆ ಗುಣಮಟ್ಟದ ಕಾಮಗಾರಿಯೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿರುವ ಸಾರ್ವಜನಿಕರು, ಗುತ್ತಿಗೆದಾರ, ಸೇರಿದಂತೆ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

3ನೇ ತರಗತಿ ಓದುವ ವಿಶೃತ್‌ ಬೆಳಗಲಿ (9) ಎಂಬ ವಿದ್ಯಾರ್ಥಿ ಮೃತಪಟ್ಟಬಾಲಕ. 7ನೇ ತರಗತಿಯಲ್ಲಿ ಓದುತ್ತಿದ್ದ ಪ್ರಜ್ವಲ್‌ ನಾಗಾವಿ (13) ಗಾಯಗೊಂಡಿದ್ದು ಕಮ್ಸ್‌ಗೆ ಸೇರಿಸಲಾಗಿದೆ, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಗ್ರಾಮದಲ್ಲಿ ಸಶ್ಮಾನ ಮೌನ ಆವರಿಸಿದೆ.