ತಾಂತ್ರಿಕ ದೋಷದಿಂದ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ.!

ರಾಮನಗರ: ತಾಂತ್ರಿಕ ದೋಷದಿಂದಾಗಿ ಕನಕಪುರ ನಗರದ ಹೊರವಲಯದಲ್ಲಿರುವ ಕಲ್ಯಾಣ ಮಂಟಪದ ಹಿಂಭಾಗ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಕಲ್ಯಾಣ ಮಂಟಪದ ಹಿಂಭಾಗದ ಗದ್ದೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಘಟನೆಯಲ್ಲಿ ಯಾರಿಗೂ ಏನೂ ಅಪಾಯವಾಗಿಲ್ಲ.

ಕಗ್ಗಲಿಪುರ ಬಳಿಯ ತಟಗುಪ್ಪ ಸಮೀಪ ತೆರಳುತ್ತಿದ್ದಾಗ ಎಂಜಿನ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣವೇ ಸಮಯಪ್ರಜ್ಞೆ ಮೆರೆದ ಪೈಲೆಟ್ ಗದ್ದೆಯಲ್ಲೇ ಇಳಿಸಿದ್ದಾರೆ. ಇನ್ನು ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮಾತ್ರ ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ದುರಸ್ತಿಯಾದ ನಂತರ ಮತ್ತೆ ಹಾರಾಟ ನಡೆಸಿದೆ. ಸಾವಿರಾರು ಜನರು ಹೆಲಿಕಾಪ್ಟರ್ ನೋಡಲು ಸ್ಥಳಕ್ಕೆ ಧಾವಿಸಿದ್ದರು.