ರಾಮನಾಥ್ ಕೋವಿಂದ್ ಅವರಿಗೆ ಸಂಸದರಿಂದ ಬೀಳ್ಕುಡುಗೆ

ನವದೆಹಲಿ: ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸನ್ಮಾನಿಸುವ ಮೂಲಕ ಸಂಸದರೆಲ್ಲ ಸೇರಿ ಇಂದು ಸಂಜೆ ಗೌರವ ಪೂರ್ವಕವಾಗಿ ಬೀಳ್ಕೊಡಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಸಂಸದರು ಭಾಗವಹಿಸಲಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಂಸದರ ಪರವಾಗಿ ಕೋವಿಂದ್ ಅವರನ್ನು ಸನ್ಮಾನಿಸಲಿದ್ದಾರೆ. ನಿರ್ಗಮಿತ ರಾಷ್ಟ್ರಪತಿಗಳಿಗೆ ಸಂಸದರೆಲ್ಲ ಸೇರಿ ಸಹಿ ಮಾಡಿದ ಸ್ಮರಣಿಕೆ ಮತ್ತು ಸಹಿ ಪುಸ್ತಕವನ್ನು ನೀಡಲಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಔತಣಕೂಟ ಏರ್ಪಡಿಸಿದ್ದರು. ಕೇಂದ್ರ ಸಚಿವ ಸಂಪುಟ ಸದಸ್ಯರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅದಲ್ಲದೇ ಪದ್ಮ ಪ್ರಶಸ್ತಿ ಪುರಸ್ಕೃತರು ಮತ್ತು ಬುಡಕಟ್ಟು ನಾಯಕರು ಸೇರಿದಂತೆ ಹಲವರು ಔತಣಕೂಟದಲ್ಲಿ ಭಾಗವಹಿಸಿದ್ದರು.