‘ಡಿಕೆಶಿ ನನಗಷ್ಟೇ ಹೇಳಿದ್ದಲ್ಲ’ ಎಂದ ಜಮೀರ್.!

ಬೆಳಗಾವಿ: ‘ಎಲ್ಲರೂ ಬಾಯಿ ಮುಚ್ಚಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡಿ’ ಎಂಬ ಡಿಕೆಶಿ ಹೇಳಿಕೆಗೆ ಜಮೀರ್ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿದ್ದರಿಂದ ಹಾಗೆ ಹೇಳುವ ಹಕ್ಕು ಅವರಿಗೆ ಇದೆ. ವೈಯಕ್ತಿಕವಾಗಿ ನನಗೆ ಮಾತ್ರ ಬಾಯಿ ಮುಚ್ಚು ಎಂದು ಅವರು ಹೇಳಿಲ್ಲ. ಒಂದು ವೇಳೆ ಹಾಗೆ ಹೇಳಿದ್ದರೂ ಅವರು ದೊಡ್ಡವರು. ಅವರದೇ ದೊಡ್ಡದಾಗಲಿ ಬಿಡಿ ಎಂದು ಬೆಳಗಾವಿಯಲ್ಲಿ ಜಮೀರ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ‘ಎಲ್ಲಕ್ಕಿಂತ ಪಕ್ಷ ಮೊದಲು. ಪಕ್ಷ ಕಟ್ಟಲು ಗಮನ ಕೊಡಿ ಎಂಬ ಕಾರಣಕ್ಕೆ ಶಿವಕುಮಾರ್ ಆ ರೀತಿ ಹೇಳಿರಬಹುದು. ನನ್ನ ಹೆಸರನ್ನು ಅವರು ಬಳಸಿಲ್ಲ’ ಎಂದು ಹೇಳಿದರು.

‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ’ ಎಂಬ ಜಮೀರ್ ಹೇಳಿಕೆಗೆ ‘ಎಲ್ಲರೂ ಬಾಯಿ ಮುಚ್ಚಿಕೊಂಡು ಪಕ್ಷ ಕಟ್ಟಲಿ’ ಎಂದು ಡಿಕೆಶಿ ಬೆಳಗ್ಗೆ ಹೇಳಿಕೆ ನೀಡಿದ್ದರು.