ಒಂದೇ ಕಾಲೇಜಿನ ಇಬ್ಬರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಆತ್ಮಹತ್ಯೆ

ಮೂಡುಬಿದಿರೆ (ಜೂ.19): ನಿಟ್ಟೆಯ ಎಂಜಿನಿಯರಿಂಗ್‌ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಜೂನ್ 18ರಂದು ನಡೆದಿದೆ. ಪುರಸಭಾ ವ್ಯಾಪ್ತಿಯ ಆಲಂಗಾರು ಆಶ್ರಯ ಕಾಲನಿಯ ನಿವಾಸಿ, ಎಸ್‌.ಎನ್‌.ಎಂ. ಪಾಲಿಟೆಕ್ನಿಕ್‌ನ ಉಪನ್ಯಾಸಕ ಸುರೇಶ್‌ ಭಂಡಾರಿ ಅವರ ಪುತ್ರ, ನಿಟ್ಟೆಯ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್‌ (21) ಮೃತ ವಿದ್ಯಾರ್ಥಿ. ಹೆತ್ತವರು, ಮೊಬೈಲ್‌ ಬಳಕೆ ಕಡಿಮೆ ಮಾಡಿ ಚೆನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್‌ ಕೂಡಾ ಹೆಚ್ಚಾಗಿ ಓದುವತ್ತ ಗಮನ ಹರಿಸಿದ್ದ. ಆದರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದು, ಈ ಬಗ್ಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.