ಭಟ್ಕಳ ಸಂತೆಯಲ್ಲಿ ಅಧಿಕಾರಿಗಳಿಂದ ದಾಳಿ.! 20 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ.!

ಭಟ್ಕಳ: ಕೇಂದ್ರ ಸರ್ಕಾರ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿರುವ ಬೆನ್ನಲ್ಲೇ ಪುರಸಭೆ ಅಧಿಕಾರಿಗಳು ರವಿವಾರ ಅಂಗಡಿಗಳ ಮೇಲೆ ದಾಳಿ ನಡೆಸಿ 20 ಕೆಜಿ ಪ್ಲಾಸ್ಟಿಕ್ ಚೀಲವನ್ನ ವಶಪಡಿಸಿಕೊಂಡಿದ್ದಾರೆ.

ಭಾನುವಾರ ಪುರಸಭೆ ಆರೋಗ್ಯಾಧಿಕಾರಿ ಸೋಜಿಯಾ ಸೋಮನ್ ನೇತೃತ್ವದಲ್ಲಿ ಸಂತೆಯಲ್ಲಿ ದಾಳಿ ನಡೆದಿದ್ದು ವ್ಯಾಪಾರಸ್ಥರಿಂದ ಸುಮಾರು 20 ಕೆಜಿಯಷ್ಟು ಪ್ಲಾಸ್ಟಿಕ್ ಚೀಲಗಳನ್ನು ವಶ ಪಡಿಸಿಕೊಂಡಿದ್ದಾರೆ. ಈ ವೇಳೆ ವ್ಯಾಪಾರಸ್ಥರು ಹಾಗೂ ಅಧಿಕಾರಿಗಳ ನಡುವೆ ಕೆಲ ಸಮಯ ಮಾತಿನ ಚಕಮಕಿ ಕೂಡ ನಡೆಯಿತು.

ಕೆಲ ದಿನಗಳ ಹಿಂದಷ್ಟೇ ಅಧಿಕಾರಿಗಳ ತಂಡ ಕೆಲ ಅಂಗಡಿಗಳಿಗೆ ತೆರಳಿ ಅಲ್ಲಿ ಬಳಸುತ್ತಿದ್ದ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡಿತ್ತು.