ಸಿದ್ದಾಪುರ : ಯೋಗದ ಮಹತ್ವದ ಕುರಿತು ಮಾಹಿತಿ.

ಸಿದ್ದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ )ಸಿದ್ದಾಪುರ ತಾಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕಿನ ಬಿಕ್ಕಳಸೆ ಸಭಾಭವನದಲ್ಲಿ ನಡೆಸಲಾಯಿತು.

ಪತಂಜಲಿ ಯೋಗ ಸಮಿತಿ ತಾಲೂಕು ಪ್ರಭಾರಿ ವೀಣಾ ಶೇಟ್ ಕಾರ್ಯಕ್ರಮ ಉದ್ಘಾಟಿಸಿ ಯೋಗದ ಮಹತ್ವ ಯೋಗ ಮಾಡುವುದರಿಂದಾಗುವ ಪ್ರಯೋಜನ ಮತ್ತು ಪ್ರಾಣಾಯಾಮ ಮಾಡುವುದರಿಂದ ಆಗುವ ಪ್ರಯೋಜನದ ಬಗ್ಗೆ ಯೋಗಾಸನ ಮಾಡುವ ಮೂಲಕ ಕಾರ್ಯಕ್ರಮವನ್ನು ನಡೆಸಲಾಯಿತು. ವಲಯದ ಮೇಲ್ವಿಚಾರಕಿ ಜ್ಯೋತಿ, ತಾಲೂಕು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಪ್ರಭಾವತಿ ಮತ್ತು ಸೇವಾ ಪ್ರತಿನಿಧಿ ಬಾಬು ಹಾಗೂ ಭೂತೇಶ್ವರ ಜ್ಞಾನ ವಿಕಾಸ ಕೇಂದ್ರದ ಸರ್ವ ಸದಸ್ಯರು ಉಪಸ್ಥಿತರಿದ್ದರು .