ಜುಲೈ :03 ರಿಂದ ಜುಲೈ:10 ರವರೆಗೆ ದಾಂಡೇಲಿಯಲ್ಲಿ ಮದ್ಯವರ್ಜನ ಶಿಬಿರ- ಪ್ರದೀಪ್ ಶೆಟ್ಟಿ

ದಾಂಡೇಲಿ : ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಡಿ ಹಾಗೂ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇದೇ ಬರುವ ಜುಲೈ:03 ರಿಂದ ಜುಲೈ:10 ರವರೆಗೆ ದಾಂಡೇಲಿ ನಗರದ ಶ್ರೀ.ವೀರಭದ್ರೇಶ್ವರ ಸಭಾಭವನದಲ್ಲಿ ಮದ್ಯವರ್ಜನ ಶಿಬಿರ ನಡೆಯಲಿದೆ ಎಂದು ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರದೀಪ್ ಶೆಟ್ಟಿಯವರು ಅವರು ಹೇಳಿದರು.

ಅವರು ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಡಿ ಈವರೆಗೆ 1682 ಮದ್ಯವರ್ಜನ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಇಲ್ಲಿಯ ಶಿಬಿರ 1683ನೇ ಶಿಬಿರವಾಗಲಿದೆ. ಶಿಬಿರದ ಯಶಸ್ಸಿಗಾಗಿ ಈಗಾಗಲೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಗಿದೆ. ಈ ಶಿಬಿರದ ಯಶಸ್ಸಿಗೆ ಎಲ್ಲ ಸಂಘ ಸಂಸ್ಥೆಗಳು ಹಾಗೂ ನಾಗರಿಕರು ಹೆಚ್ಚಿನ ಸಹಕಾರವನ್ನು ನೀಡುವಂತೆ ಪ್ರದೀಪ್ ಶೆಟ್ಟಿಯವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ.ಕ್ಷೇತ್ರ.ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಶ್ರೀಕಾಂತ್ ನಾಯ್ಕ ಅವರು ಉಪಸ್ಥಿತರಿದ್ದರು.