ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಹಂತಕರನ್ನು ಬಂಧಿಸಿ, ಇಲ್ಲ ದಯಾಮರಣ ಕೊಡಿ

ಚಿಕ್ಕಮಗಳೂರು: ಬಿಜೆಪಿ ಮುಖಂಡನ‌ ಹತ್ಯೆಯಾಗಿ 5 ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ಹಾಗಾಗಿ ಹಂತಕರ ಬಂಧನ ಮಾಡದ ಹಿನ್ನೆಲೆ ಬಿಜೆಪಿ ಮುಖಂಡನ ಕುಟುಂಬ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. 5 ವರ್ಷದ ಹಿಂದೆಯೇ ಬಿಜೆಪಿ ಮುಖಂಡ ಹಾಗೂ ಸಿ.ಟಿ ರವಿ ಆಪ್ತನಾಗಿದ್ದ ಅನ್ವರ್​​ನನ್ನು ನಗರದ ಗೌರಿ ಕಾಲುವೆ ಬಳಿ ಚಾಕುವಿನಿಂದ 13 ಬಾರಿ ಇರಿದು ಹತ್ಯೆ ಮಾಡಲಾಗಿತ್ತು. ಹತ್ಯೆಗೊಳಗಾದ ಅನ್ವರ್​ ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ.

ಬಿಜೆಪಿ ಸರ್ಕಾರ ಇದ್ದಾಗಲೂ ಸರಿಯಾದ ತನಿಖೆ ನಡೆಸಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ವರ್ ಹತ್ಯೆ ಪ್ರಕರಣವನ್ನ ಹಿಂದಿನ ಬಿಜೆಪಿ ಸರ್ಕಾರ ಸಿಐಡಿಗೆ ಒಪ್ಪಿಸಿದ್ದರು. 5 ವರ್ಷವಾದರೂ ಹಂತಕರನ್ನು ಬಂಧಿಸಿಲ್ಲ. ಹಾಗಾಗಿ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆಯಲಾಗಿದೆ.