ಸರ್ಕಾರಿ ಶಾಲಾ ಆವರಣದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಅಡ್ಡಿ: ಬಿಇಒ ಸಸ್ಪೆಂಡ್​ಗೆ ಎಂಬಿ ಪಾಟೀಲ್​ ಆದೇಶ

ವಿಜಯಪುರ: ಸರ್ಕಾರಿ ಶಾಲಾ ಆವರಣದಲ್ಲಿ ಸಾರ್ವಜನಿಕ ಗ್ರಂಥಾಲಯ ನಿರ್ಮಾಣಕ್ಕೆ ಅಡ್ಡಿಪಡಿಸಿರುವ ಆರೋಪ ಕೇಳಿಬಂದ ಹಿನ್ನೆಲೆ ಬಸವನಬಾಗೇವಾಡಿ ಬಿಇಒ ಶೇಖರ್ ಬಳಬಟ್ಟಿಯವರನ್ನು ಅಮಾನತು ಮಾಡುವಂತೆ ಡಿಡಿಪಿಐಗೆ ಸಚಿವ ಎಂ.ಬಿ.ಪಾಟೀಲ್ ಆದೇಶಿಸಿದ್ದಾರೆ. ಇಂದು (ಜೂ.23) ವಿಜಯಪುರ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಬಿಇಒ ಶೇಖರ್ ಬಳಬಟ್ಟಿ ವಿಚಾರ ಪ್ರಸ್ತಾಪಿಸಿದರು.

ಬಿಇಒ ಶೇಖರ್ ಬಳಬಟ್ಟಿ ಯರನಾಳ ಸರ್ಕಾರಿ ಶಾಲಾ ಆವರಣದಲ್ಲಿ ಸಾರ್ವಜನಿಕ ಗ್ರಂಥಾಲಯ ನಿರ್ಮಾಣಕ್ಕೆ ಪರವಾನಗಿ ನೀಡದೇ ಉದ್ಧಟತನ ಮಾಡುತ್ತಿದ್ದಾರೆ ಎಂದು ಶಿವಾನಂದ ಪಾಟೀಲ್ ಹೇಳಿದರು. ಇದಕ್ಕೆ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿ ತಕ್ಷಣವೇ ಬಿಇಒ ಅವರನ್ನು ಸಸ್ಪೆಂಡ್ ಮಾಡುವಂತೆ ಡಿಡಿಪಿಐಗೆ ಆದೇಶಿಸಿದರು