ಜಿಲ್ಲೆಗೆ ಶೀಘ್ರ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್.? ಟ್ವೀಟ್ ಮೂಲಕ ಕೋಟ ಭರವಸೆ.!

ಕಾರವಾರ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಯಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು ಶೀಘ್ರದಲ್ಲೇ ಜಿಲ್ಲೆಯ ಜನತೆಗೆ ಸಿಹಿಸುದ್ದಿ ಕೊಡುವ ಭರವಸೆ ನೀಡಿದ್ದಾರೆ.

ಟ್ವೀಟ್‌ನಲ್ಲಿ ಹೇಳಿದ್ದೇನು.?

‘ಉತ್ತರ ಕನ್ನಡ ಜಿಲ್ಲೆಯ ಹೃದಯ ಭಾಗ ಕುಮಟಾದ ಆಸುಪಾಸಿನಲ್ಲಿ ಸದ್ಯದಲ್ಲೇ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಎಲ್ಲರ ಸಹಕಾರವಿರಲಿ’ ಎಂದು ಹೇಳಿದ್ದಾರೆ.
ಇನ್ನು ಅನೇಕರು ಸಚಿವರ ಟ್ವೀಟ್‌ಗೆ ರೀ ಟ್ವೀಟ್ ಮಾಡಿ ಆದಷ್ಟು ಶೀಘ್ರದಲ್ಲಿ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಲಿ ಎಂದು ಆಶಿಸಿದ್ದಾರೆ.