ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದರು. ವೇಗವಾಗಿ ಸಾಗುತ್ತಿರುವ ಹಿನ್ನೆಲೆ ಕಾರಿನ ಟಯರ್ ಸ್ಫೋಟಗೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.