ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿಸಿದ ಪೆಟ್ರೋಲ್ ಬಂಕ್ ಮಾಲೀಕರು

ಬೆಂಗಳೂರು: ಡೀಸೆಲ್ ಹಾಕಿಸಿದ್ದ ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಪೆಟ್ರೋಲ್ ಬಂಕ್​ನಲ್ಲಿ ಕೂಡಿಸಿದ ಅಮಾನವೀಯ ಘಟನೆ  Vijayapura ಜಿಲ್ಲೆಯಲ್ಲಿ ನಡೆದಿದೆ. ವಾಹನಗಳಿಗೆ ಡೀಸೆಲ್ ಹಾಕಿಸಿದ್ದ ಬಾಕಿ ಹಣ ವಸೂಲಿಗೆ ಮೌನೇಶ್ ಪತ್ತಾರ್ ಎನ್ನುವಾತನನ್ನು ಅರೆಬೆತ್ತಲೆಗೊಳಿಸಿ ಮುದ್ದೇಬಿಹಾಳ ಪಟ್ಟಣದಲ್ಲಿರುವ ಬೋಸಲೆ ಬಂಕ್​ನಲ್ಲಿ ಕೂಡಿಹಾಕಿದ್ದಾರೆ. 10 ರಿಂದ 15 ಲಕ್ಷ ರೂ. ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.

ತಮಿಳುನಾಡು ಮೂಲದ ಶಿವಶಕ್ತಿ ಬೋರ್ ವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮೌನೇಶ, ವಾಹನಗಳಿಗೆ ಬೋಸಲೆ ಅವರ ಬಂಕ್ ನಲ್ಲಿ ಡೀಸೆಲ್ ಹಾಕಿಸುತ್ತಿದ್ದ. ಆದ್ರೆ, ಶವಶಕ್ತಿ ಬೋರ್ ವೆಲ್ಸ್​ನವರು ಡೀಸೆಲ್ ಬಾಕಿ ಹಣ ನೀಡದೇ ಹೋಗಿದ್ದಾರೆ. ಹೀಗಾಗಿ ಬಾಕಿ ಹಣಕ್ಕಾಗಿ ಪೆಟ್ರೋಲ್ ಬಂಕ್ ಮಾಲೀಕ, ಮೌನೇಶ್​ನನ್ನು ಹಿಡಿದುಕೊಂಡಿದ್ದಾರೆ. ಅಲ್ಲದೇ ಹಣ ಕೊಡಬೇಕೆಂದು ಮೌನೇಶ್​ನನ್ನು ಬಂಕ್​ನಲ್ಲೇ ಕೂಡಿಹಾಕಿದ್ದಾರೆ. ಇನ್ನು ಮೌನೇಶ ಬಿಡುಗಡೆಗಾಗಿ ಆತನ ಪತ್ನಿ ಹಾಗೂ ಮಕ್ಕಳು ಕಳೆದ ಮೂರು ದಿನಗಳಿಂದ ಬೋಸಲೆ ಪೆಟ್ರೋಲ್ ಬಂಕ್ ನಲ್ಲೇ ಕುಳಿತುಕೊಂಡಿದ್ದಾರೆ.

10 ರಿಂದ 15 ಲಕ್ಷ ರೂ. ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗೂ ತೆರಳಲು ಬಿಡದೇ ಬಂಕ್ ಮಾಲೀಕರು ಮೌನೇಶ ಕುಟುಂಬಸ್ಥರನ್ನು ತಡೆಹಿಡಿದಿದ್ದಾರೆ ಎನ್ನಲಾಗಿದೆ.