ಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ

ಜೋಯಿಡಾ : ನಾಡಪ್ರಭು ಶ್ರೀ.ಕೆಂಪೇಗೌಡರ ಜನ್ಮಜಯಂತಿ ಕಾರ್ಯಕ್ರಮವನ್ನು ಜೋಯಿಡಾ ತಾಲೂಕು ಕೇಂದ್ರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಮಂಗಳವಾರ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಬಸವರಾಜ್.ಟಿ ಅವರು ಜಗತ್ತಿಗೆ ಬೆಂಗಳೂರನ್ನು ಪರಿಚಯಿಸಿದ ಹೆಗ್ಗಳಿಕೆ ನಾಡಪ್ರಭು ಕೆಂಪೇಗೌಡ ಅವರಿಗೆ ಸಲ್ಲುತ್ತದೆ. ಕೆಂಪೇಗೌಡರ ಆಡಳಿತ ಕ್ರಮ, ದೂರದೃಷ್ಟಿ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ಸದಾ ಸ್ಮರಣೀಯ ಎಂದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಆನಂದ ಬಡಕುಂದ್ರಿ, ಉಪ ತಹಶೀಲ್ದಾರರುಗಳಾದ ಸಂಜೀವ್ ಭಜಂತ್ರಿ ಮತ್ತು ಸುರೇಶ್ ಒಕ್ಕುಂದ ಹಾಗೂ ತಹಶೀಲ್ದಾರ್ ಕಚೇರಿಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.