ಗುಂಡಿಕ್ಕಿ ಜಾನುವಾರು ಹತ್ಯೆ, ಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್​

ಹಾಸನ: ಗುಂಡು ಹಾರಿಸಿ ಜಾನುವಾರು ಹತ್ಯೆ ಮಾಡಿ, ಮಾಂಸ ಮಾರಾಟಕ್ಕೆ ಯತ್ನಿಸಿದ ಅಮಾನವೀಯ ಘಟನೆ ಹಾಸನ ಜಿಲ್ಲೆ‌ಯ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿಯಲ್ಲಿ ನಡೆದಿದೆ. ನಿನ್ನೆ(ಜೂ.27) ಸಂಜೆ ಕಾಫಿ ತೋಟದಲ್ಲಿ ಕ್ಯಾಮನಹಳ್ಳಿಯ ದಯಾನಿದಿ ಎಂಬುವರಿಗೆ ಸೇರಿದ ಎಮ್ಮೆಯ ಮೇಲೆ ಪರವಾನಗಿ ಇಲ್ಲದ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಮಾಂಸ ಕತ್ತರಿಸುವ ವೇಳೆ ವೇಳೆ ಸ್ಥಳೀಯರು ಸ್ಥಳಕ್ಕೆ ಬಂದಿದ್ದು, ಅವರನ್ನು ನೋಡುತ್ತಿದ್ದಂತೆ ಕಿಡಿಗೇಡಿಗಳು ಎಸ್ಕೇಪ್ ಆಗಿದ್ದರು. ಬಳಿಕ ಜಾನುವಾರು ಹತ್ಯೆ ಆರೋಪದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತ ಆರೋಪಿಗಳ ಬಳಿಯಿದ್ದ 1 ಬಂದೂಕನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.