ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಅಪಾರ ಪ್ರಮಾಣದ ಹಣ, ಚಿನ್ನಾಭರಣ ಪತ್ತೆ, ಎಲ್ಲೆಲ್ಲಿ ಎಷ್ಟೆಷ್ಟು?

ಬೆಂಗಳೂರು: ರಾಜ್ಯಾದ್ಯಂತ ಇಂದು(ಜೂ.28) ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳು ಹಾಗೂ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಈ ಹಿಂದೆ ಮೇ.31 ಕರ್ನಾಟಕದ ಅನೇಕ ಕಡೆಗಳಲ್ಲಿ ದಾಳಿ ನಡೆಸಿದ್ದರು. ಇದೀಗ ಏಕಕಾಲಕ್ಕೆ ರಾಜ್ಯದ ಬೆಂಗಳೂರು, ಚಿಕ್ಕಮಗಳೂರು, ಕೊಪ್ಪಳ, ತುಮಕೂರು, ಬಾಗಲಕೋಟೆ, ಕೋಲಾರ ರಾಯಚೂರು ಸೇರಿದಂತೆ ಹಲವು ಕಡೆ ಲೋಕಾ ಬಿಸಿ ಮುಟ್ಟಿಸಿದೆ. ಮುಂಜಾನೆ ಸಿಹಿ ನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಎಂಟ್ರಿ ಶಾಕ್​ ನೀಡಿದೆ. ಅದರಂತೆ ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಹಣ, ಚಿನ್ನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.