ಆರ್.ಬಿ.ಐ. ಕ್ವಿಜ್ ಮಾಸ್ಟರ್ ನಲ್ಲಿ ಹಳ್ಳಿಬೈಲ್ ಸರಕಾರಿ ಪ್ರೌಢಶಾಲೆ ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಸಿದ್ದಾಪುರ: ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಬೆಂಗಳೂರು ಇವರು ಮಂಗಳವಾರ ಕುಮಟಾದಲ್ಲಿ ಏರ್ಪಡಿಸಿದ್ದ
ಅಖಿಲ ಭಾರತ ಹಣಕಾಸು ಸಾಕ್ಷರತಾ ವಿಷಯದ ಕುರಿತು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಲೂಕಿನ ಹಳ್ಳಿಬೈಲ್ ಪ್ರೌಢಶಾಲೆ ವಿದ್ಯಾರ್ಥಿ ಕು. ವಿವೇಕ್ ಹೆಗಡೆ ಹಾಗೂ ಕು.ಅನಿಶಾ ಹೆಗಡೆ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಅರ್ಹತಾ ಸುತ್ತಿಗೆ ಆಯ್ಕೆ ಆಗಿಯಾಗಿ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ಮಾಡಿದ ಗುರುವೃಂದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಶಾಲೆ ಮುಕ್ಯೋಪಾಧ್ಯಾಯರು
ಬಿ.ಆರ್.ಸಿ. ಸಮನ್ವಯಾಧಿಕಾರಿ ಚೈತನ್ಯಕುಮಾರ್ ಕೆ. ಎಮ್. ಎಸ್.ಡಿ.ಎಮ್.ಸಿ. ಅಧ್ಯಕ್ಷ ಮಂಜುನಾಥ ನಾಯ್ಕ ಹಾಗೂ ಪಾಲಕ ಪೋಷಕರು, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.