ಯಲ್ಲಾಪುರದ ಅನಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದೆ ಲಕ್ಷ ತುಳಸಿ ಅರ್ಚನೆ

ಯಲ್ಲಾಪುರ: ತಾಲೂಕಿನ ಅನಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಜೂ.29 ರಂದು ಆಶಾಢ ಏಕಾದಶಿ ಪ್ರಯುಕ್ತ ಪ್ರತಿ ವರ್ಷದಂತೆ ಲಕ್ಷ ತುಳಸಿ ಅರ್ಚನೆ ನಡೆಯಲಿದೆ.
ಬೆಳಗ್ಗೆ 10 ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ದೇವಸ್ಥಾನದ ಪುರೋಹಿತ ಡಾ.ಶಂಕರ ಭಟ್ಟ ಬಾಲೀಗದ್ದೆ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ.
ಮಧ್ಯಾಹ್ನ 3 ಕ್ಕೆ ಮಂಜುನಾಥ ಭಟ್ಟ ದೇವದಮನೆ ತಂಡದಿಂದ ರಾಮ ನಿರ್ಯಾಣ ಯಕ್ಷಗಾನ ತಾಳಮದ್ದಲೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ನಾರಾಯಣ ಭಟ್ಟ ಬಿದ್ರೆಪಾಲ ತಿಳಿಸಿದ್ದಾರೆ.