5 ಕೆ.ಜಿ ಅಕ್ಕಿ, ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ಸರ್ಕಾರ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ 5 ಕೆ.ಜಿ ಅಕ್ಕಿ ಕೊಟ್ಟು ಉಳಿದ 5 ಕೆ.ಜಿ ಅಕ್ಕಿಯ ಬದಲು ಅದರ ಹಣವನ್ನು ನೀಡುವುದಾಗಿ ಸರ್ಕಾರ ನಿಧಾರ ಮಾಡಿದೆ.

ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಬಳಿಕ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಹಾಗೂ ಹೆಚ್.ಕೆ ಪಾಟೀಲ್, ಅನ್ನಭಾಗ್ಯ ಯೋಜನೆ ಅಕ್ಕಿ ಹೊಂದಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾಪ ತಿರಸ್ಕಾರ ಹಾಗೂ ಇತರೆ ರಾಜ್ಯಗಳಿಂದ ಅಕ್ಕಿ ಕೊಳ್ಳುವ ಮುಂದಿನ ನಡೆ ಬಗ್ಗೆ ಸಹಾ ಚರ್ಚೆ ನಡೆಲಾಯಿತು ಎಂದರು.

ಬಳಿಕ 10 ಕೆ.ಜಿ ಅಕ್ಕಿ ಬದಲಿಗೆ 8 ಕೆ.ಜಿ ಅಕ್ಕಿ, 2 ಕೆ.ಜಿ ರಾಗಿ/ಗೋಧಿ ಅಥವಾ ಜೋಳ ಕೊಡುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಈ ವೇಳೆ 5 ಕೆ.ಜಿ ಅಕ್ಕಿ ಕೊಟ್ಟು ಇನ್ನೂ 5 ಕೆ.ಜಿ ಅಕ್ಕಿಗೆ ಹಣ ಕೊಡೋವುದರ ಬಗ್ಗೆ ನಿರ್ಧಾರ ಮಾಡಲಾಯಿತು ಎಂದು ಹೇಳಿದರು.