ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಅಧಿಕಾರಿಗಳಿಂದ ಅಂಗಡಿಕಾರರಿಗೆ ಸೂಚನೆ.!

ಹೊನ್ನಾವರ: ಪ.ಪಂ ವ್ಯಾಪ್ತಿಯ ವಿವಿಧ ಅಂಗಡಿ ಮುಂಗಟ್ಟುಗಳಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಹಾಗೂ ಪ,ಪಂ ಮುಖ್ಯಾಧಿಕಾರಿರವರ ನೇತೃತ್ವದಲ್ಲಿ ಕಚೇರಿಯ ಸಿಬ್ಬಂದಿಗಳು ಸೋಮವಾರ ದಾಳಿ ಮಾಡಿ ನಿಷೇದಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.

ಬಸ್ ನಿಲ್ದಾಣ, ಬಜಾರ್ ರಸ್ತೆಯ ಪ್ರಮುಖ ಅಂಗಡಿಗಳಿಗೆ ದಾಳಿ ನಡೆಸಿ ಒಟ್ಟೂ 20 ಕೆ.ಜಿ. ನಿಷೇದಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 1000 ರೂ ದಂಡವಿಧಿಸಿದ್ದಾರೆ. ಬಿತ್ತಿ ಪತ್ರವನ್ನು ಪ್ರದರ್ಶಿಸಿ ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಎಚ್ಚರಿಕೆ ನೀಡಿದರು. ಇನ್ನೂ ಮುಂದೆ ನಿಷೇಧಿತ ಪ್ಲಾಸ್ಟಿಕ್ ಬಳಸಿದರೆ ಅಂಗಡಿ ಸೀಜ್ ಮಾಡುವುದಾಗಿ ಎಚ್ಚರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರದ ಅಧಿಕಾರಿಗಳು, ಪಟ್ಟಣ ಪಂಚಾಯತ್ ಅಧಿಕಾರಿಗಳು ಇದ್ದರು.