ಯಲ್ಲಾಪುರ ತಾಲೂಕಿನ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪ್ರಶಾಂತ ಸಭಾಹಿತ ಆಯ್ಕೆ


ಯಲ್ಲಾಪುರ :-ತಾಲೂಕಿನ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪ್ರಶಾಂತ ಸಭಾಹಿತ ಹಾಗೂ ಉಪಾಧ್ಯಕ್ಷರಾಗಿ ವೆಂಕಟರಮಣ ನರಸಿಂಹ ಭಟ್ಟ ಕಾರೆಮನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಕಾರ್ಯಾಲಯದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ನಾರಾಯಣ ಗಾಂವ್ಕರ, ಮಂಜುನಾಥ ಭಟ್ಟ, ಸುಬ್ರಹ್ಮಣ್ಯ ಭಟ್ಟ, ಸುಬ್ರಾಯ ಹೆಗಡೆ, ಸತ್ಯನಾರಾಯಣ ಹೆಗಡೆ, ಕಮಲಾ ಭಟ್ಟ, ಸರಸ್ವತಿ ಭಟ್ಟ, ಮಂಜುನಾಥ ಪಟಗಾರ, ಸಂತೋಷ ಮರಾಠಿ ಇದ್ದರು.