ಯಲ್ಲಾಪುರ:ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮೇಶ ಭಾಗ್ವತ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಭಟ್ಟ ಕೋಣೆಮನೆ


ಯಲ್ಲಾಪುರ: ತಾಲೂಕಿನ ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮೇಶ ಭಾಗ್ವತ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಭಟ್ಟ ಕೋಣೆಮನೆ ಅವಿರೋಧವಾಗಿ ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮೇಶ ಭಾಗ್ವತ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಭಟ್ಟ ಕೋಣೆಮನೆಯಾಗಿದ್ದಾರೆ.
ಸಂಘದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿಯಾಗಿ ಶಕ್ತಿಪ್ರಸಾದ ಜಂಬಗಿ ಆಯ್ಕೆ ಪ್ರಕ್ರಿಯೆ ನಡೆಸಿದರು.
ಅಧ್ಯಕ್ಷ ಉಮೇಶ ಭಾಗ್ವತ ಮಾತನಾಡಿ, ಸಂಘವನ್ನು ಪ್ರಗತಿಯ ಪಥದಲ್ಲಿ ಮುಂದುವರಿಸಲಾಗುವುದು ಎಂದರು.
ಪ್ರಭಾರಿ ಮುಖ್ಯಕಾರ್ಯನಿರ್ವಾಹಕ ದತ್ತಾತ್ರೇಯ ಹೆಗಡೆ, ನಿರ್ದೇಶಕ ಸೂರ್ಯನಾರಾಯಣ ಸಾಂಬ ಭಟ್ಟ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.