ಕರ್ನಾಟಕದಲ್ಲಿ ಪ್ರತ್ಯೇಕ ಅವಘಡ: ನಾಲ್ವರ ದುರ್ಮರಣ

ಬೆಂಗಳೂರು(ಜು.02):  ರಾಜ್ಯದ ವಿವಿಧೆಡೆ ಇಂದು(ಭಾನುವಾರ) ಸಂಭವಿಸಿದ ಪ್ರತ್ಯೇಕ ಅವಘಡಗಳಲ್ಲಿ ನಾಲ್ಕು ಜನ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಪಟ್ಡಣದ ಹೊರವಲಯದಲ್ಲಿ ನಡೆದಿದೆ. 

ಮೃತ ಬೈಕ್ ಸವಾರನ್ನ ಬಸವರಾಜ್ (23) ಅಂತ ಗುರುತಿಸಲಾಗಿದೆ. ಮತ್ತೊಂದು ಬೈಕಿನಲ್ಲಿದ್ದ ರಾಜು, ಅಮರೇಶ್ ಎಂಬುವರಿಗೆ ಗಾಯಗಳಾಗಿವೆ. ಮೃತ ಬಸವರಾಜ್ ಒಂದೇ ಬೈಕ್‌ನಲ್ಲಿ ಇಬ್ಬರು ಗೆಳೆಯರನ್ನ ಕೂರಿಸಿಕೊಂಡು ಹೋಗುತ್ತಿದ್ದ, ಈ ವೇಳೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ತೀವ್ರ ರಕ್ತಸ್ರಾವದಿಂದ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆತನ ಜೊತೆಗೆ ಬೈಕ್ ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.