ತಾಲೂಕು ಕನ್ನಡ ವೈಶ್ಯ ಸಮಾಜ ಸಂಘದ ಅಧ್ಯಕ್ಷರಾಗಿ ಸಂಜೀವ ಕುಮಾರ ಅವಿರೋಧ ಆಯ್ಕೆ

ಯಲ್ಲಾಪುರ: ತಾಲೂಕು ಕನ್ನಡ ವೈಶ್ಯ ಸಮಾಜ ಸಂಘದ ಅಧ್ಯಕ್ಷರಾಗಿ ಸಂಜೀವಕುಮಾರ ಹೊಸ್ಕೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಟ್ಟಣದ ವೆಂಕಟ್ರಮಣ ಮಠದಲ್ಲಿ ನಡೆದ ಸಂಘದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವಾಧ್ಯಕ್ಷರಾಗಿ ಶ್ರೀಕಾಂತ ಶೆಟ್ಟಿ, ಉಪಾಧ್ಯಕ್ಷರಾಗಿ ರೂಪಾ ಬಡಿಗೇರ ಹಾಗೂ ಡಾ.ಗುರುರಾಜ ಬಿ.ಶೆಟ್ಟಿ, ಕೋಶಾಧ್ಯಕ್ಷರಾಗಿ ಸೂರಜ್ ಶೆಟ್ಟಿ, ಕಾರ್ಯದರ್ಶಿಯಾಗಿ ಸತೀಶ ಶೆಟ್ಟಿ, ಸಹ ಕಾರ್ಯದರ್ಶಿಯಾಗಿ ವಿನಾಯಕ ಬಂಕಿಕೊಡ್ಲ, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಂದ್ರ ಶೆಟ್ಟಿ, ಕಿರಣ ಶೆಟ್ಟಿ ಆಯ್ಕೆಯಾಗಿದ್ದಾರೆ.