ಇಂದು ದಾಂಡೇಲಿಯಲ್ಲಿ ಮದ್ಯವರ್ಜನ ಶಿಬಿರ- ಜಯಕರ್

ದಾಂಡೇಲಿ : ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಡಿ ಹಾಗೂ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದಿನಿಂದ ಜುಲೈ:10 ರವರೆಗೆ ದಾಂಡೇಲಿ ನಗರದ ಶ್ರೀ.ವೀರಭದ್ರೇಶ್ವರ ಸಭಾಭವನದಲ್ಲಿ ಮದ್ಯವರ್ಜನ ಶಿಬಿರ ನಡೆಯಲಿದೆ ಎಂದು ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯ ಕ್ಷೇತ್ರ ಮೇಲ್ವಿಚಾರಕರಾದ ಜಯಕರ್ ಅವರು ಹೇಳಿದರು.

ಅವರು ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಈಗಾಗಲೆ ಮದ್ಯವರ್ಜನ ಶಿಬಿರಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದ್ದು, ಸರಿ ಸುಮಾರು 80 ಶಿಬಿರಾರ್ಥಿಗಳು ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದು ಜಯಕರ್ ಅವರು ಹೇಳಿದರು.