ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ

ನವದೆಹಲಿ: ಇಲ್ಲಿನ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಇಂದು (ಬುಧವಾರ) ಮಧ್ಯಾಹ್ನ ಗುಂಡಿನ ದಾಳಿ ನಡೆದಿದೆ.

ಕೆಲವು ವಕೀಲರು ತೀವ್ರ ವಾಗ್ವಾದದಲ್ಲಿ ತೊಡಗಿದ ನಂತರ ಈ ಗುಂಡಿನ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕಾಗಮಿಸಿದ್ದು, ಗುಂಡಿನ ದಾಳಿಯಲ್ಲಿ ಯಾವುದೇ ಗಾಯಗಳಾಗಿಲ್ಲ. ಗುಂಡಿನ ದಾಳಿಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಎಂದು ಅವರು ಹೇಳಿದರು.

ಶಸ್ತ್ರಾಸ್ತ್ರಗಳಿಗೆ ಪರವಾನಗಿ ನೀಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಕೂಡ ತನಿಖೆ ನಡಸಲಾಗುವುದು. ಶಸ್ತ್ರಾಸ್ತ್ರಗಳು ಪರವಾನಗಿ ಪಡೆದಿದ್ದರೂ ಸಹ, ಯಾವುದೇ ವಕೀಲರು ಅಥವಾ ಬೇರೆಯವರು ನ್ಯಾಯಾಲಯದ ಆವರಣದ ಒಳಗೆ ಅಥವಾ ಸುತ್ತಮುತ್ತ ಈ ರೀತಿಯಾಗಿ ಬಳಸುವಂತಿಲ್ಲ ಎಂದು ಹೇಳಿದರು.