ಪರೀಕ್ಷೆಯಲ್ಲಿ ಫೇಲ್​; ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು: ಕಾಲೇಜು ವಿದ್ಯಾರ್ಥಿ ಯೋರ್ವ ಫ್ಯಾನ್​ಗೆ ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಯ್ಯಪ್ಪನಹಳ್ಳಿಯ ಕೃಷ್ಣಯ್ಯನಪಾಳ್ಯದಲ್ಲಿ ನಡೆದಿದೆ. ಚಾರ್ಲ್ಸ್(18) ಮೃತ ವಿದ್ಯಾರ್ಥಿ. ಚಾರ್ಲ್ಸ್ ಆರು ತಿಂಗಳ ಹಿಂದೆ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದ. ನಂತರ ಮರು ಪರೀಕ್ಷೆ ಕಟ್ಟಿ ಎಕ್ಸಾಂ ಬರೆದಿದ್ದ ಚಾರ್ಲ್ಸ್, ಅದರಲ್ಲೂ ಫೇಲ್​ಯಾಗಿದ್ದ. ಈ ವೇಳೆ ಕಾಲೇಜಿನವರು ಮೃತ ಬಾಲಕನ ಫೋಷಕರಿಗೆ ಬೇರೆ ಕಾಲೇಜಿಗೆ ಸೇರಿಸುವಂತೆ ಹೇಳಿದ್ದರು.

ಮೊದಲ ಬಾರಿ ಫೇಲಾಗಿದ್ದಾಗಿನಿಂದಲೂ ಮನನೊಂದಿದ್ದ ಚಾರ್ಲ್ಸ್, ಪುನಃ ಅನುತ್ತೀರ್ಣವಾದ ಹಿನ್ನಲೆ ಖಿನ್ನತೆಗೆ ಒಳಗಾಗಿ, ಸಾಯಲು ನಿರ್ಧಾರ ಮಾಡಿದ್ದ. ಅದರಂತೆ ನಿನ್ನೆ(ಜು.5) ರಾತ್ರಿ 9:30 ರ ಸುಮಾರಿಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಚಾರ್ಲ್ಸ್ ಮೃತದೇಹವನ್ನು ಸಿವಿ ರಾಮನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.