ಜುಲೈ 27, 28 ರಂದು ಭಟ್ಕಳದಲ್ಲಿ ಮದ್ಯ ನಿಷೇಧ.!

ಭಟ್ಕಳ: ತಾಲೂಕಿನಲ್ಲಿ ಮಾರಿಕಾಂಬಾ ದೇವಿ ಜಾತ್ರೆಯು ಜು.26 ರಿಂದ 28 ವರೆಗೆ ನಡೆಯಲಿದೆ. ಜಾತ್ರೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಭಟ್ಕಳ ತಾಲೂಕಿನಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಜು.27 ರ ಸಂಜೆ 6.00 ಗಂಟೆಯಿಂದ ಜು. 28 ರ ರಾತ್ರಿ 12.00 ಗಂಟೆಯವರೆಗೆ ಭಟ್ಕಳ ತಾಲೂಕಿನಲ್ಲಿರುವ ಎಲ್ಲಾ ಮದ್ಯದಂಗಡಿ, ವೈನ್ ಶಾಪ್ ಮತ್ತು ಬಾರ್‌ಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.