ಬದಲಾದ ಸರ್ಕಾರ: ರಾಜ್ಯ ಪ್ರಧಾನ ಅಭಿಯೋಜಕರ ಹುದ್ದೆಗೆ ಕಿರಣ್​ ಜವಳಿ ರಾಜೀನಾಮೆ

ಬೆಂಗಳೂರು: ಕರ್ನಾಟಕ ಪ್ರಧಾನ ಅಭಿಯೋಜಕರ ಹುದ್ದೆಗೆ ಕಿರಣ್​ ಜವಳಿ ಅವರು ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಬಿಜೆಪಿ(BJP) ಸರ್ಕಾರ 2022ರ ಜುಲೈ 22ರಂದು ಎಸ್​​​ಪಿಪಿಯಾಗಿ ಕಿರಣ್​ ಜವಳಿ ಅವರನ್ನು ನೇಮಿಸಿತ್ತು. ಆದ್ರೆ, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರಿಂದ ಕಿರಣ್ ಜವಳಿ, ಪ್ರಧಾನ ಅಭಿಯೋಜಕರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಮೊದಲು ವಿಜಯ ಕುಮಾರ್‌ ಎಂ ಶೀಲವಂತ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಹಿರಿಯ ವಕೀಲ ಕಿರಣ್‌ ಎಸ್‌ ಜವಳಿ ಅವರನ್ನು ಅಡ್ವೊಕೇಟ್‌ ಜನರಲ್‌ ಅವರ ಕಚೇರಿಯಲ್ಲಿ ಸರ್ಕಾರಿ ಅಭಿಯೋಜಕರ ಹುದ್ದೆಗೆ ನೇಮಕ ಮಾಡಿ ಕಾನೂನು ಇಲಾಖೆ ಆದೇಶ ಹೊರಡಿಸಿತ್ತು. ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 23ರ ಅನ್ವಯ ಜವಳಿ ಅವರನ್ನು ನೇಮಕ ಮಾಡಲಾಗಿತ್ತು. ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ನಡೆಸುವ ಪೀಠದ ಮುಂದೆ ಕಿರಣ್ ಜವಳಿ ಅವರು ಒಂದು ವರ್ಷ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದರು.

ಇತ್ತೀಚೆಗೆಷ್ಟೇ ರಾಜ್ಯ ಸರ್ಕಾರದ ನೂತನ ಅಡ್ವೊಕೇಟ್‌ ಜನರಲ್ ಆಗಿ ಹಿರಿಯ ವಕೀಲ ಹಾಗೂ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿತ್ತು.