ಬಿಜೆಪಿ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ.!

ಮಂಗಳೂರು: ತಲ್ವಾರ್‌ನಿಂದ ಕೊಚ್ಚಿ ಬಿಜೆಪಿ ಯುವ ಮುಖಂಡನನ್ನು ಹತ್ಯೆ ಮಾಡಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ನಡೆದಿದೆ. ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಪ್ರವೀಣ್‌ನನ್ನ ಆಸ್ಪತ್ರೆಗೆ ಸಾಗಿಸಿದಾಗ ಸಾವನ್ನಪ್ಪಿದ್ದಾರೆ.

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲೀಕರಾಗಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ, ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೇರಳ ನೋಂದಣಿ ಬೈಕ್‌ನಲ್ಲಿ ಬಂದ ಅಪರಿಚಿತರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಮುನ್ನಚ್ಚೆರಿಕೆಯಾಗಿ ಪುತ್ತೂರು ನಗರ ಮತ್ತು ಬೆಳ್ಳಾರೆಯ ಎಲ್ಲಾ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದ್ದಾರೆ. ಬೆಳ್ಳಾರೆಯಲ್ಲಿ ವಾರದ ಹಿಂದೆ ನಡೆದ ಕೊಲೆಗೆ ರಿವೇಂಜ್ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೇರಳ ಗಡಿ ಹಾಗೂ ಪುತ್ತೂರಿನ ಸುತ್ತಮುತ್ತ ಈಗಾಗಲೇ ನಾಕಾಬಂದಿ ಹಾಕಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ತಲಾಶ್ ನಡೆಸ್ತಾ ಇದ್ದಾರೆ.