ಹೆದ್ದಾರಿಯಲ್ಲಿ ಕಾರಿನಲ್ಲಿ ಹೋಗುತ್ತಿರುವಾಗಲೇ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಲಖಿಂಪುರ ಖೇರಿಯ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಅಂಕಿತ್ ಶ್ರೀವಾಸ್ತವ ಅವರು ತಮ್ಮ ಬಲೆನೊ ಕಾರಿನಲ್ಲಿ ಲಖಿಂಪುರದಿಂದ ಲಖನೌಗೆ ಚಲಾಯಿಸುತ್ತಿದ್ದಾಗ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಬಲೆನೊ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹಳ್ಳಕ್ಕೆ ಹಾರಿದೆ.

ಅಂಕಿತ್ ಮೃತದೇಹವನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಕ್ರೇನ್ ಸಹಾಯದಿಂದ ಕಾರನ್ನು ಯಶಸ್ವಿಯಾಗಿ ಹಳ್ಳದಿಂದ ಹೊರತೆಗೆಯಲಾಯಿತು. ವಾಹನ ಮತ್ತು ದೇಹವನ್ನು ವಶಕ್ಕೆ ಪಡೆದು, ಪೊಲೀಸರು ಘಟನೆಯ ತನಿಖೆಯನ್ನು ಪ್ರಾರಂಭಿಸಿದ್ದಾರೆ.