ರಾಯಚೂರಿನಲ್ಲಿ ಟೊಮ್ಯಾಟೊಗಾಗಿ ಚಾಕು ಇರಿತ; ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದ ಮಾರ್ಕೆಟ್​ನಲ್ಲಿ ಟೊಮ್ಯಾಟೊಗಾಗಿ ಚಾಕು ಇರಿದ ಘಟನೆ ನಡೆದಿದೆ. ಇದೇ ಜುಲೈ 8 ರ ತಡರಾತ್ರಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾನ್ವಿ ಪುರಸಭೆ ಮಳಿಗೆಯ ತರಕಾರಿ ಮಾರ್ಕೆಟ್​ನಲ್ಲಿ ರಫಿ ಎಂಬಾತ ಕಾವಲಿಗಾಗಿ ತಳ್ಳುವ ತರಕಾರಿ ಗಾಡಿಯಲ್ಲಿ ಮಲಗಿದ್ದ. ಈ ವೇಳೆ ರಫಿ ಜೊತೆ ಮಾತನಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಸಡನ್​ ಆಗಿ ಕುತ್ತಿಗೆ ಭಾಗಕ್ಕೆ ಚಾಕು ಇರಿದು ಎಸ್ಕೇಪ್ ಆಗಿದ್ದಾನೆ.ಆರೋಪಿಯ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಾಳು ರಫಿಗೆ ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಟೊಮ್ಯಾಟೊ ಕಳ್ಳತನಕ್ಕೆ ಯತ್ನಿಸಿರೋ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.