ಸಿನಿಮಾ ಟಿಕೆಟ್ ಬೆಲೆ ಇಳಿಸಿ: ಸಿಎಂಗೆ ಫಿಲ್ಮ್ ಚೇಂಬರ್ ಮನವಿ

ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಮತ್ತು ತಂಡ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. ಚಿತ್ರೋದ್ಯಮಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ಮನವಿ ಪತ್ರವೊಂದನ್ನು ನೀಡಿದೆ. ಈ ಮನವಿ ಪತ್ರದಲ್ಲಿ ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ದರ ಕಡಿಮೆ ಮಾಡುವುದರ ಜೊತೆಗೆ ಹಲವು ಬೇಡಿಕೆಗಳನ್ನು ಇಡಲಾಗಿದೆ.

ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ.ಹರೀಶ್, ನಟ ಸುಂದರ್ ರಾಜ್ , ನಟಿ ಪ್ರಮಿಳಾ ಜೋಷಾಯಿ ಸೇರಿದಂತೆ ಮಂಡಳಿಯ ಪದಾಧಿಕಾರಿಗಳು ಸಿಎಂ ಭೇಟಿ ಮಾಡಿ, ನಿರ್ಮಾಪಕರಿಗೆ ಹಾಗೂ ಪ್ರದರ್ಶಕರಿಗೆ ಪೂರಕ ತಂತ್ರಜ್ಞಾನ ಅಳವಡಿಕೆಗೆ ಮನವಿ ಮಾಡಿದೆ. ಅಂದಾಜು 20 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲ್ ಡಿಸಿಪಿ ಯಂತ್ರೋಪಕರಣವನ್ನು ಸ್ಥಾಪಿಸಲು ಆಯವ್ಯಯದಲ್ಲಿ ಹಣ ನಿಗದಿ ಮಾಡಬೇಕು ಎಂದು ಕೇಳಿದೆ.