ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿ, ಕನಸು ನನಸಾಗದೇ ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ: ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿಯೊರ್ವ, ಕನಸು ನನಸಾಗದೆ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ನಡೆದಿದೆ. ಶಿಡ್ಲಘಟ್ಟ ನಗರದ ನಿವಾಸಿ ನಯಾಜ್ ಪಾಷ ಆತ್ಮಹತ್ಯಗೆ ಶರಣಾದ ವಿದ್ಯಾರ್ಥಿ. ಇತ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದ. ಈ ಹಿನ್ನಲೆ ಮೆಡಿಕಲ್​ಗೆ ಸೇರಲು ಸಾಧ್ಯವಾಗದೆ ಖಾಸಗಿ ಖೋಟಾದಡಿ ಮೆಡಿಕಲ್​ಗೆ ಸೇರಿಸುವಂತೆ ಮನೆಯಲ್ಲಿ ಒತ್ತಾಯ ಮಾಡಿದ್ದ ಎನ್ನಲಾಗಿದೆ. ಇದೇ ವಿಚಾರದಲ್ಲಿ ನಯಾಜ್ ಪಾಷಾ ನಿನ್ನೆ(ಜು.11) ರಾತ್ರಿ ಕುಟುಂಬಸ್ಥರೊಂದಿಗೆ ಬೇಸರ ಮಾಡಿಕೊಂಡಿದ್ದನಂತೆ. ಇಂದು(ಜು.12) ಬೆಳಿಗ್ಗೆ ಶಿಡ್ಲಘಟ್ಟ ನಗರದ ಹೊರವಲಯದ ಅಮ್ಮನ ಕರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶಿಡ್ಲಘಟ್ಟ ನಗರ ಠಾಣೆ ಪೊಲೀಸರು ಅನುಮಾನಸ್ಫದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ.