ಕರ್ತವ್ಯ ಲೋಪ ಆರೋಪ-ಒಂದೇ ತಾಲೂಕಿನ ಮೂವರು ಪಿಡಿಒಗಳು ಸಸ್ಪೆಂಡ್…

ಹಾಸನ: ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಮೂವರು ಪಿಡಿಒ ಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪ‌ ಕೇಳಿಬಂದಿತ್ತು. ಈ ಹಿನ್ನಲೆ ಡಿ.ಕಾಳೇನಹಳ್ಳಿ ಪಿಡಿಒ C.N.ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅಮಾನತುಗೊಂಡವರು. ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು. ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಾಡಿಕೊಟ್ಟಿದ್ದಾರೆಂಬ ಆರೋಪ‌ದ ಮೇಲೆ, ಅಮಾನತು ಮಾಡಲಾಗಿದೆ.