ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ, ಬಾವಿಯಲ್ಲಿ ಶವ ಪತ್ತೆ

ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಶವ ಬಾವಿಯೊಳಗೆ ಪತ್ತೆಯಾಗಿದೆ. ಸಂಸದ ಕಿರೋಡಿ ಲಾಲ್ ಮೀನಾ ಸೇರಿದಂತೆ ಪ್ರತಿಪಕ್ಷ ಬಿಜೆಪಿ ನಾಯಕರು ಮತ್ತು ಯುವತಿಯ ಕುಟುಂಬ ಸದಸ್ಯರು ಶವದ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಹೊರಗೆ ಧರಣಿ ನಡೆಸಿದರು.

ಕೂಡಲೇ ಆರೋಪಿಯನ್ನು ಬಂಧಿಸಿ 50 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕು ಹಾಗೂ ತಮ್ಮ ಕುಟುಂಬದಲ್ಲಿ ಯಾರಿಗಾದರೂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ತೋಡಭೀಮ್ ಪ್ರದೇಶದ ಮೋಹನಪುರ ನಿವಾಸಿಯಾಗಿರುವ ಯುವತಿ ಬುಧವಾರ ನಾಪತ್ತೆಯಾಗಿದ್ದಾರೆ ಎಂದು ನಡೌಟಿ ಎಸ್‌ಎಚ್‌ಒ ಬಾಬು ಲಾಲ್ ತಿಳಿಸಿದ್ದಾರೆ.

ಆಕೆಯನ್ನು ಅಪಹರಿಸಿ ನಂತರ ಕೊಲೆ ಮಾಡಲಾಗಿದೆ ಎಂದು ಆಕೆಯ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕಿ ಮೀನಾ, ಮಹಿಳೆಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲ್ಲಲಾಗಿದೆ ಎಂದು ಹೇಳಿದ್ದಾರೆ.