ಪೊಲೀಸರೆಂದು ಹೇಳಿ ಮನೆಗೆ ನುಗ್ಗಿದ ಖದೀಮರು; ಚಾಕು ತೋರಿಸಿ ಕೈಯಲ್ಲಿದ್ದ ಉಂಗುರ, ಇತರೆ ವಸ್ತುಗಳನ್ನು ದೋಚಿದ ಕಳ್ಳರು

ಬೆಂಗಳೂರು: ಮಹಾನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿರುವ ಯುವಕರೇ ಹುಷಾರು,ನಕಲಿ ಪೋಲಿಸರ ಹಾವಳಿ ಹೆಚ್ಚಾಗಿದೆ. ಹೌದು ನಾವು ಪೊಲೀಸರೆಂದು ಹೇಳಿ ಯುವಕರಿದ್ದ ಬಾಡಿಗೆ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿಮ್ಮ ರೂಂನಲ್ಲಿ ಡ್ರಗ್ಸ್​​ ಸೇವಿಸುವ ಬಗ್ಗೆ ಮಾಹಿತಿಯಿದೆ, ಪರಿಶೀಲನೆ ನಡೆಸಬೇಕೆಂದು ಒಳಗಡೆ ಬಂದಿದ್ದಾರೆ. ಮನೆಯಲ್ಲಿ ಏನೂ ಬೆಲೆ ಬಾಳುವ ವಸ್ತುಗಳು ಸಿಗದ ಕಾರಣ ನಾಲ್ವರು ಯುವಕರಿಗೆ ಚಾಕು ತೋರಿಸಿ ಕೈಯಲ್ಲಿದ್ದ ಉಂಗುರ, ಇತರೆ ವಸ್ತುಗಳನ್ನು ದೋಚಿದ್ದಾರೆ. ಅಷ್ಟೇ ಅಲ್ಲದೆ ಫೋನ್​ ಪೇ ಮೂಲಕ 13 ಸಾವಿರ ಹಣವನ್ನ ಅಕೌಂಟ್​ಗೆ ಹಾಕಿಸಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಖದೀಮರಿಗಾಗಿ ಬಲೆ ಬೀಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಯುವಕರು

ಇನ್ನು ಈ ಮೂವರು ಯುವಕರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೇ, ಓರ್ವ ಯುವಕ ವ್ಯಾಸಂಗ ಮಾಡುತ್ತಿದ್ದ. ಇಂದು(ಜು.14) ಬೆಳಗ್ಗಿನ ಜಾವ ಮನೆಯ ಬಾಗಿಲು ತಟ್ಟಿದ್ದ ಸುಲಿಗೆಕೋರರು. ಬಾಗಿಲು ತೆರೆಯುತ್ತಿದ್ದಂತೆ ಏಕಾಏಕಿ ಒಳ ನುಗ್ಗಿ, ಯುವಕರಿಗೆ ಚಾಕು ತೋರಿಸಿ ಸುಲಿಗೆ ಮಾಡಿದ್ದಾರೆ. ಆರೋಪಗಳಿಗಾಗಿ ವಿದ್ಯಾರಣ್ಯಪುರ ಪೊಲೀಸರು ಶೋಧ ನಡೆಸುತ್ತಿದ್ದಾರೆ.