ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಾಂಡೇಲಿಗೆ ಭೇಟಿ : ವಿವಿಧ ಕಾಮಗಾರಿಗಳ ಪರಿಶೀಲನೆ

ದಾಂಡೇಲಿ : ಉ.ಕ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ದಾಂಡೇಲಿ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನಿರ್ಮಾಣವಾಗುತ್ತಿರುವ ಜಾಕವೆಲ್ ಪಾಯಿಂಟ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವ್ಯಾಪ್ತಿಯಲ್ಲಿ ನಿರ್ಮಾಣದ ಹಂತದಲ್ಲಿರುವ ಜಲ ಶುದ್ದೀಕರಣ ಘಟಕಕ್ಕೆ ಇಂದು ಭೇಟಿ ನೀಡಿ, ಕಾಮಗಾರಿಗಳನ್ನು ಶೀಘ್ರವೇ ಮುಕ್ತಾಯಗೊಳಿಸಿ, ಸಾರ್ವಜನಿಕರು ಅದರ ಉಪಯೋಗ ಪಡೆದುಕೊಳ್ಳಬೇಕು. ಹಾಗೂ ಕಾಮಗಾರಿಗಳ ಗುಣಮಟ್ಟವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಹಾಲಮ್ಮನವರ್, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು