ಸಿದ್ದಾಪುರ : ದೇಶದ ಶಿಕ್ಷಣ ಹಾಗೂ ಸಂಸ್ಕೃತಿ ಬದಲಾವಣೆ ಮಾಡುವ ಶಕ್ತಿ ಮಾಧ್ಯಮಕ್ಕಿದೆ ಎಂದು ಬಿ ಇ ಒ ಜಿ ಐ ನಾಯ್ಕ್ ಹೇಳಿದರು ಅವರು ತಾಲೂಕಿನ ಸರಕುಳಿ ಜಗದಂಬಾ ಪ್ರೌಢಶಾಲೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಗುರುಮನೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು
ಪತ್ರಿಕಾರಂಗ ಇಂದು ಅತ್ಯಂತ ಮಹತ್ವವಾಗಿದ್ದು ದೃಶ್ಯ ಮಾಧ್ಯಮಗಳು ಬಂದ ಸಂದರ್ಭದಲ್ಲಿ ಪತ್ರಿಕೆಗಳು ಮರೆಯಾಗುತ್ತವೆ ಎನ್ನುವ ಆತಂಕ ಇತ್ತು ಆದರೆ ಇಂದು ಸಹ ಪತ್ರಿಕೆ ಗಳು ಇವೆ ಎಂದರೆ ಅದು ಪತ್ರಿಕೆಗೆ ಇರುವ ಶಕ್ತಿಯಾಗಿದೆ ಎಂದರು
ಪತ್ರಿಕೆ ಸಮಾಜದ ಹಾಗೂ ಸರ್ಕಾರದ ಕಣ್ಣುಗಳನ್ನು ತೆರೆಸುವಂತಹುದಾಗಿದೆ ಎಂದು ಸರಕುಳಿ ಜಗದಂಬಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಜಿ.ಹೆಗಡೆ ತ್ಯಾರಗಲ್
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರಕುಳಿ ಸಹಿಪ್ರಾ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಪ್ರಶಾಂತ ಹೆಗಡೆ ಮೇಲ್ಗಿರಿ ತಾಲೂಕು ಪತ್ರಕರ್ತರ ಮಾಹಿತಿ ಬಿಡುಗಡೆಮಾಡಿದರು.
ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ಟ ಬಕ್ಕಳ ಪತ್ರಕರ್ತರ ಸಂಘಟನೆ ಕುರಿತು ಮಾತನಾಡಿ ಸರ್ಕಾರ ಪತ್ರಕರ್ತರ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ಸೇವೆಯನ್ನು ನೀಡಬೇಕೆಂದು ಆಗ್ರಹಿಸಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಬಸವರಾಜ್ ಪಾಟೀಲ್ ಮುಂಡಗೋಡ ಮಾತನಾಡಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿಅಧ್ಯಕ್ಷತೆವಹಿಸಿದ್ದರು.
ಪ್ರೌಢಶಾಲೆಯ ಮುಖ್ಯಾಧ್ಯಾಪಕ ಕೃಷ್ಣಮೂರ್ತಿ ಹೆಗಡೆ, ಸಹಿಪ್ರಾ ಶಾಲೆಯ ಮುಖ್ಯಾಧ್ಯಾಪಕಿ ಕಲ್ಪನಾ ವೈದ್ಯ ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.
ಸನ್ಮಾನ: ಹಿರಿಯ ಪತ್ರಕರ್ತರಾದ ನರೇಂದ್ರ ಹೆಗಡೆ ಹೊಂಡಗಾಶಿ ದಂಪತಿಯನ್ನು ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿoದ ಸನ್ಮಾನಿಸಲಾಯಿತು. ಹಿರಿಯ ಸಾಹಿತಿ ಶ್ರೀನಿವಾಸ ಶಾನಭಾಗ ಹಾರ್ಸಿಕಟ್ಟಾ ಅವರಿಗೆ ಗುರುಮನೆ ದತ್ತಿನಿಧಿ ಪ್ರಶಸ್ತಿಯನ್ನು ಕೆಕ್ಕಾರ ನಾಗರಾಜ ಭಟ್ಟ ಪ್ರದಾನ ಮಾಡಿ ಗೌರವಿಸಿದರು. ನರೇಂದ್ರ ಹೆಗಡೆ ಹಾಗೂ ಶ್ರೀನಿವಾಸ ಶಾನಭಾಗ ಅನಿಸಿಕೆ ವ್ಯಕ್ತಪಡಿಸಿದರು.ಸಿದ್ದಾಪುರ ತಾಲೂಕಿನ ಸರಕುಳಿ ಪ್ರೌಢಶಾಲೆಯಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ನರೇಂದ್ರ ಹೆಗಡೆ ಹೊಂಡಗಾಸಿಗೆ ದಂಪತಿ ಹಾಗೂ ಸಾಹಿತಿ ಶ್ರೀನಿವಾಸ ಶಾನಭಾಗ ದಂಪತಿಯನ್ನು ಸನ್ಮಾನಿಸಲಾಯಿತು.
ಅಂಕಿತಾ ಸಂಗಡಿಗರು ಹಾಗೂ ರೇಖಾ ಹೆಗಡೆ ಹೊಂಡಗಾಶಿ ಪ್ರಾರ್ಥನೆ ಹಾಡಿದರು. ಪತ್ರಕರ್ತರಾದ ಸುಜಯ ಭಟ್ಟ, ಶ್ರೀಧರ ಹೆಗಡೆ, ನಾಗರಾಜ ಭಟ್ಟ, ಶಿವಶಂಕರ ಕೋಲಸಿರ್ಸಿ, ರಮೇಶ ಹಾರ್ಸಿಮನೆ ಕಾರ್ಯಕ್ರಮ ನಿರ್ವಹಿಸಿದರು.