ಹಳಿಯಾಳದಲ್ಲಿ ವಕೀಲ ಮಲ್ಲಿಕಾರ್ಜುನ ಅಷ್ಟೇಕರ ಮೇಲೆ ನಡೆದ ಹಲ್ಲೆಗೆ ಎ.ಐ.ಎಲ್.ಯೂ ಸದಸ್ಯೆ ರತ್ನದೀಪಾ.ಎನ್.ಎಂ ಖಂಡನೆ

ದಾಂಡೇಲಿ : ಹಳಿಯಾಳದ ಹಿರಿಯ ವಕೀಲರಾದ ಮಲ್ಲಿಕಾರ್ಜುನ.ವಿ.ಅಷ್ಟೇಕರ ಮೇಲೆ ನಡೆದ ಹಲ್ಲೆಯನ್ನು ಅಖಿಲ ಭಾರತ ವಕೀಲರ ಒಕ್ಕೂಟದ ಸದಸ್ಯೆ ರತ್ನದೀಪಾ.ಎನ್.ಎಂ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಶುಕ್ರವಾರ ದಾಂಡೇಲಿಯಲ್ಲಿ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ಮಲ್ಲಿಕಾರ್ಜುನ ಅಷ್ಟೇಕರ್ ಅವರ ಮೇಲೆ ನಡೆದ ಹಲ್ಲೆ ಖಂಡನೀಯವಾಗಿದ್ದು ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ಹಲ್ಲೆಗಳಂತಹ ಕೃತ್ಯಗಳು ನಡೆಯುತ್ತಿವೆ. ವಕೀಲರ ರಕ್ಷಣೆಗಾಗಿ ವಕೀಲರ ರಕ್ಷಣಾ ಕಾಯ್ದೆಯನ್ನು ಕೂಡಲೆ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.