ದಾಂಡೇಲಿಯ ಭಾವಸಾರ ನಾಮದೇವ ಸಿಂಪಿ ಸಮಾಜದ ಹನುಮಂತಪ್ಪ.ಬಿ.ಮಾಳದಕರ ನಿಧನ

ದಾಂಡೇಲಿ : ಭಾವಸಾರ ನಾಮದೇವ ಸಿಂಪಿ ಸಮಾಜದ ಸಹಕಾರಿ ಸಂಘ(ರಿ) ದಾಂಡೇಲಿ ಇದರ ಸಂಸ್ಥಾಪಕ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ವಿಜಯನಗರದ ನಿವಾಸಿ ಹನುಮಂತಪ್ಪ ಬಿ ಮಾಳದಕರ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಶನಿವಾರ ನಸುಕಿನ ವೇಳೆಯಲ್ಲಿ ವಿಧಿವಶರಾಗಿದ್ದಾರೆ. ಮೃತರಿಗೆ 68 ವರ್ಷ ವಯಸ್ಸಾಗಿತ್ತು.

ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಹನುಮಂತಪ್ಪ.ಬಿ. ಮಾಳದಕರ ಅವರು ಸಾಮಾಜಿಕ, ಧಾರ್ಮಿಕ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಸಂಖ್ಯೆಯಲ್ಲಿ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.