ಗೌರವ ಡಾಕ್ಟರೇಟ್‌ಗೆ ಭಾಜನರಾದ ನಾಗೇಂದ್ರ ಭಟ್ ಹಿತ್ಲಳ್ಳಿಯವರಿಗೆ ಸನ್ಮಾನ

ಯಲ್ಲಾಪುರ: ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಿ, ಜ್ಞಾನಾರ್ಜನೆ ಮಾಡಬೇಕು ಎಂದು ವೇ.ಮೂ ನಾಗೇಂದ್ರ ಭಟ್ಟ ಹಿತ್ಲಳ್ಳಿ ಹೇಳಿದರು. ಅಮೆರಿಕಾದ ಶ್ರೀ ವಿದ್ಯಾ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೆ ಭಾಜನರಾದ ಹಿನ್ನೆಲೆಯಲ್ಲಿ ತಾಲೂಕಿನ ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಕಾಲೇಜಿನಲ್ಲಿ ನೀಡಿದ ಗೌರವ ಸ್ವೀಕರಿಸಿ ಅವರು ಮಾತನಾಡಿದರು.

ಸಂಸ್ಥೆಯ ಅಧ್ಯಕ್ಷ ಟಿ. ವಿ. ಹೆಗಡೆ ಬೆದೆಹಕ್ಕಲು ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಡಾ. ನಾಗೇಶ ಭಟ್ಟ, ಅಧ್ಯಾಪಕರಾದ ಡಾ.ನಾಗೇಶ ಭಟ್ಟ ಕೆ.ಸಿ., ಡಾ.ಮಹೇಶ ಭಟ್ಟ ಇಡಗುಂದಿ ಇತರರು ಹಾಜರಿದ್ದರು.