ದಾಂಡೇಲಿಯ ಹೆಸ್ಕಾಂ ಉಪ ವಿಭಾಗೀಯ ಕಾರ್ಯಾಲಯದಲ್ಲಿ ವಿದ್ಯುತ್ ಗ್ರಾಹಕರೊಂದಿಗೆ ಸಂವಾದ ಸಭೆ

ದಾಂಡೇಲಿ : ನಗರದ ಹೆಸ್ಕಾಂ ಉಪ ವಿಭಾಗೀಯ ಕಾರ್ಯಾಲಯದಲ್ಲ್ಲಿ ಶನಿವಾರ ಗ್ರಾಹಕರೊಂದಿಗೆ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಯ್ತು.

ಹೆಸ್ಕಾಂ ದಾಂಡೇಲಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಪುರುಷೋತ್ತಮ ಮಲ್ಯರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಸ್ಕಾಂ ಇಲಾಖೆಯ ನಿಯಾಮವಳಿಗಳನ್ನು ವಿವರಿಸಲಾಯ್ತು. ಸಭೆಯಲ್ಲಿ ಗ್ರಾಹಕರು ತಮ್ಮ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಮಸ್ಯೆಗಳನ್ನು ಪರಿಹರಿಸಲೆಂದೆ ಈ ಸಭೆಯನ್ನು ನಡೆಸಲಾಗುತ್ತಿದ್ದು, ಆಧ್ಯತೆಯಡಿ ಸಮಸ್ಯೆಗಳ ಬಗೆಹರಿಸಲು ಕ್ರಮವನ್ನು ಕೈಗೊಳ್ಳಲಾಗುವುದೆಂದು ಪುರುಷೋತ್ತಮ ಮಲ್ಯ ಅವರು ಹೇಳಿದರು.

ವೇದಿಕೆಯಲ್ಲಿ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ, ಸಹಾಯಕ ಲೆಕ್ಕಾಧಿಕಾರಿ ಸಚಿನ್ ನಾಡಕರ್ಣಿ, ತಾಂತ್ರಿಕ ವಿಭಾಗದ ಸಹಾಯಕ ಅಭಿಯಂತರರಾದ ವೆಂಕಟೇಶ್ ತಳೇಕರ್, ಶಾಖಾಧಿಕಾರಿ ಪರಶುರಾಮ ಉಪ್ಪಾರ್ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಹಕರು ತಮ್ಮ ತಮ್ಮ ಕುಂದುಕೊರತೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.